ಉಪವರ್ಗಗಳು

ಹದೀಸ್‌ಗಳ ಪಟ್ಟಿ

.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
“ಓ ಅಲ್ಲಾಹನ ಸಂದೇಶವಾಹಕರೇ! ಜನರ ಪೈಕಿ ಪುನರುತ್ಥಾನ ದಿನ ತಮ್ಮ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರು?” ಎಂದು ಕೇಳಲಾಯಿತು. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಓ ಅಬೂಹುರೈರ! ಹದೀಸಿನ ಬಗ್ಗೆ ತಮಗಿರುವ ಆಸಕ್ತಿಯನ್ನು ಕಂಡು ತಮಗಿಂತ ಮೊದಲು ಯಾರೂ ಈ ಹದೀಸಿನ ಬಗ್ಗೆ ಕೇಳಲಾರರು ಎಂದು ನಾನು ಭಾವಿಸಿದ್ದೆ. @ಪುನರುತ್ಥಾನ ದಿನ ಜನರ ಪೈಕಿ ನನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರೆಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ ಎಂದು ತನ್ನ ಹೃದಯ ಮತ್ತು ಮನಸ್ಸಿನಿಂದ ನಿಷ್ಕಳಂಕವಾಗಿ ಹೇಳಿದವನು.”
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಮಾತನ್ನು ಹೇಳಿದರು ಮತ್ತು ನಾನು ಇನ್ನೊಂದು ಮಾತನ್ನು ಹೇಳಿದೆ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “@ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸುವ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ನರಕವನ್ನು ಪ್ರವೇಶಿಸುವರು.*” [ಬುಖಾರಿ]. ನಾನು ಹೇಳಿದೆ: "ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸದ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುವರು."
عربي ಆಂಗ್ಲ ಉರ್ದು
“ತೀವ್ರವಾದಿಗಳು ನಾಶವಾದರು*.” ಅವರು ಇದನ್ನು ಮೂರು ಸಲ ಹೇಳಿದರು.
عربي ಆಂಗ್ಲ ಉರ್ದು
ಅಲೀ ಬಿನ್ ಅಬೂ ತಾಲಿಬ್ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ನನ್ನೊಂದಿಗೆ ಹೇಳಿದರು: "@ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ ಒಂದು ಪ್ರತಿಮೆಯನ್ನು ಅಳಿಸದೆ ಬಿಡಬಾರದು ಮತ್ತು ಎತ್ತರಿಸಲ್ಪಟ್ಟ ಒಂದೇ ಒಂದು ಸಮಾಧಿಯನ್ನು ನೆಲಸಮ ಮಾಡದೆ ಬಿಡಬಾರದು."
عربي ಆಂಗ್ಲ ಉರ್ದು
ಒಂದು ಯಾತ್ರೆಯಲ್ಲಿ ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿದ್ದರು. ಆಗ ಜನರು ಮಲಗುವ ಸ್ಥಳದಲ್ಲಿದ್ದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಬ್ಬ ದೂತನನ್ನು ಕಳುಹಿಸಿ ಹೇಳಿದರು: "@ಒಂಟೆಯ ಕೊರಳಲ್ಲಿ ಬಿಲ್ಲಿನ ತಂತಿಯಿಂದ ಮಾಡಿದ ಹಾರ ಅಥವಾ ಬೇರೆ ಯಾವುದೇ ಹಾರವಿದ್ದರೂ ಅದನ್ನು ಕತ್ತರಿಸದೆ ಬಿಟ್ಟು ಬಿಡಬೇಡ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಸಮಾಧಿಗಳ ಮೇಲೆ ಕೂರಬೇಡಿ ಮತ್ತು ಅವುಗಳ ಕಡೆಗೆ ನಮಾಝ್ ಮಾಡಬೇಡಿ."
عربي ಆಂಗ್ಲ ಉರ್ದು
ಒಮ್ಮೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅಬಿಸೀನಿಯಾದಲ್ಲಿ ನೋಡಿದ ಮಾರಿಯ ಎಂಬ ಹೆಸರಿನ ಇಗರ್ಜಿಯ ಬಗ್ಗೆ ಮತ್ತು ಅದರಲ್ಲಿ ಅವರು ನೋಡಿದ ಚಿತ್ರಗಳ ಬಗ್ಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಮನ ಸೆಳೆದಾಗ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಅವರು ಎಂತಹ ಜನರೆಂದರೆ, ಅವರಲ್ಲಿ ಒಬ್ಬ ನೀತಿವಂತ ದಾಸ ಅಥವಾ ಒಬ್ಬ ನೀತಿವಂತ ವ್ಯಕ್ತಿ ಮರಣಹೊಂದಿದರೆ, ಅವರು ಅವನ ಸಮಾಧಿಯ ಮೇಲೆ ಆರಾಧನಾಲಯವನ್ನು ನಿರ್ಮಿಸುತ್ತಿದ್ದರು* ಮತ್ತು ಅದರಲ್ಲಿ ಆ ಚಿತ್ರಗಳನ್ನು ರಚಿಸುತ್ತಿದ್ದರು. ಅವರು ಅಲ್ಲಾಹನ ದೃಷ್ಟಿಯಲ್ಲಿ ಸೃಷ್ಟಿಗಳಲ್ಲೇ ಅತ್ಯಂತ ನಿಕೃಷ್ಟರು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "@ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ."
عربي ಆಂಗ್ಲ ಉರ್ದು
"ನಿಶ್ಚಯವಾಗಿಯೂ ನಿಮ್ಮ ತಂದೆಯರ ಮೇಲೆ ಆಣೆ ಮಾಡುವುದನ್ನು ಸರ್ವಶಕ್ತನಾದ ಅಲ್ಲಾಹು ನಿಮಗೆ ವಿರೋಧಿಸುತ್ತಾನೆ.*" ಉಮರ್ ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇದನ್ನು ಹೇಳುವುದನ್ನು ಕೇಳಿದ ನಂತರ ನಾನು ಉದ್ದೇಶಪೂರ್ವಕವಾಗಿ ಅಥವಾ ಇತರರ ಮಾತನ್ನು ಉಲ್ಲೇಖಿಸಿ ಅವರ ಮೇಲೆ ಆಣೆ ಮಾಡಿಲ್ಲ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. . : :
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹುನೈನ್ ಯುದ್ಧಕ್ಕೆ ಹೊರಟಾಗ, ಬಹುದೇವವಿಶ್ವಾಸಿಗಳ 'ಝಾತ್ ಅನ್ವಾತ್' ಎಂಬ ಹೆಸರಿನ ಮರದ ಬಳಿಯಿಂದ ಸಾಗಿದರು. ಅವರು ಅದರಲ್ಲಿ ತಮ್ಮ ಆಯುಧಗಳನ್ನು ತೂಗಿಸುತ್ತಿದ್ದರು. ಆಗ ಅವರು (ಸಹಾಬಿಗಳು) ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರಿಗೆ ಒಂದು ‘ಝಾತ್ ಅನ್ವಾತ್’ ಇರುವಂತೆ ನಮಗೂ ಒಂದು ‘ಝಾತ್ ಅನ್ವಾತ್’ ನಿಶ್ಚಯಿಸಿಕೊಡಿ. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಪರಿಶುದ್ಧನು! ಇದು ಮೂಸಾರ ಜನರು ಹೇಳಿದಂತೆ ಆಗಿದೆ. "ಅವರಿಗೆ ಒಬ್ಬ ದೇವರು ಇರುವಂತೆ ನಮಗೂ ಒಬ್ಬ ದೇವರನ್ನು ನಿಶ್ಚಯಿಸಿಕೊಡು." [ಅಅ್‌ರಾಫ್: 138] @ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಿಶ್ಚಯವಾಗಿಯೂ ನೀವು ನಿಮಗಿಂತ ಮೊದಲಿನವರ ಚರ್ಯೆಗಳನ್ನು ಹಿಂಬಾಲಿಸುವಿರಿ."
عربي ಆಂಗ್ಲ ಉರ್ದು
. : . :
عربي ಆಂಗ್ಲ ಉರ್ದು
ಒಮ್ಮೆ ಒಂದು ಗುಂಪು ಜನರು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದರು. ಅವರು ಒಂಬತ್ತು ಮಂದಿಯಿಂದ ನಿಷ್ಠೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಆದರೆ ಒಬ್ಬರಿಂದ ಅದನ್ನು ತಡೆಹಿಡಿದರು. ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನೀವು ಒಂಬತ್ತು ಮಂದಿಯಿಂದ ನಿಷ್ಠೆಯ ಪ್ರತಿಜ್ಞೆ ಸ್ವೀಕರಿಸಿದಿರಿ. ಆದರೆ ಇವನನ್ನು ಬಿಟ್ಟಿರಲ್ಲವೇ?" ಅವರು ಹೇಳಿದರು: "ಅವನು ತಾಯಿತ ಧರಿಸಿದ್ದಾನೆ." ಆಗ ಆತ ಕೈಯನ್ನು ಒಳಗೆ ತೂರಿಸಿ ಅದನ್ನು ತುಂಡು ಮಾಡಿದನು. ಪ್ರವಾದಿಯವರು ಆತನಿಂದ ನಿಷ್ಠೆಯ ಪ್ರತಿಜ್ಞೆ ಸ್ವೀಕರಿಸುತ್ತಾ ಹೇಳಿದರು: @"ತಾಯಿತ ಕಟ್ಟಿದವನು ಶಿರ್ಕ್ (ದೇವ ಸಹಭಾಗಿತ್ವ) ಮಾಡಿದನು."
عربي ಆಂಗ್ಲ ಉರ್ದು