عَنْ جَابِرِ بْنِ عَبْدِ اللَّهِ رضي الله عنهما أَنَّ النَّبِيَّ صَلَّى اللهُ عَلَيْهِ وَسَلَّمَ قَالَ:
«أُعْطِيتُ خَمْسًا لَمْ يُعْطَهُنَّ أَحَدٌ قَبْلِي: نُصِرْتُ بِالرُّعْبِ مَسِيرَةَ شَهْرٍ، وَجُعِلَتْ لِي الأَرْضُ مَسْجِدًا وَطَهُورًا، فَأَيُّمَا رَجُلٍ مِنْ أُمَّتِي أَدْرَكَتْهُ الصَّلاَةُ فَلْيُصَلِّ، وَأُحِلَّتْ لِي المَغَانِمُ، وَلَمْ تَحِلَّ لِأَحَدٍ قَبْلِي، وَأُعْطِيتُ الشَّفَاعَةَ، وَكَانَ النَّبِيُّ يُبْعَثُ إِلَى قَوْمِهِ خَاصَّةً وَبُعِثْتُ إِلَى النَّاسِ عَامَّةً».
[صحيح] - [متفق عليه] - [صحيح البخاري: 335]
المزيــد ...
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ. ಒಂದು ತಿಂಗಳ ಪ್ರಯಾಣದಷ್ಟು ದೂರದ ತನಕ ನನಗೆ ಭಯದ ಮೂಲಕ ಸಹಾಯ ಮಾಡಲಾಗಿದೆ. ನನಗೆ ಭೂಮಿಯನ್ನು ಮಸೀದಿ ಮತ್ತು ಶುದ್ಧೀಕರಣದ ವಸ್ತುವಾಗಿ ಮಾಡಿಕೊಡಲಾಗಿದೆ. ನನ್ನ ಸಮುದಾಯದ ವ್ಯಕ್ತಿಗೆ ಯಾವುದೇ ಸ್ಥಳದಲ್ಲಿ ನಮಾಝಿನ ಸಮಯವಾದರೂ ಆತ ನಮಾಝ್ ಮಾಡಬಹುದು. ನನಗೆ ಯುದ್ಧಾರ್ಜಿತ ಸೊತ್ತನ್ನು ಅನುಮತಿಸಲಾಗಿದೆ. ನನಗಿಂತ ಮೊದಲಿನ ಯಾವುದೇ ಪ್ರವಾದಿಗೂ ಇದನ್ನು ಅನುಮತಿಸಲಾಗಿರಲಿಲ್ಲ. ನನಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ನೀಡಲಾಗಿದೆ. ಇತರ ಪ್ರವಾದಿಗಳನ್ನು ವಿಶೇಷವಾಗಿ ಅವರ ಜನತೆಗೆ ಮಾತ್ರ ಕಳುಹಿಸಲಾಗುತ್ತಿತ್ತು. ಆದರೆ ನನ್ನನ್ನು ಸಂಪೂರ್ಣ ಮನುಕುಲಕ್ಕೆ ಕಳುಹಿಸಲಾಗಿದೆ."
[صحيح] - [متفق عليه] - [صحيح البخاري - 335]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಅಲ್ಲಾಹು ಅವರಿಗೆ ಐದು ವಿಶೇಷತೆಗಳನ್ನು ನೀಡಿದ್ದಾನೆ. ಅವುಗಳನ್ನು ಅವರಿಗಿಂತ ಮೊದಲಿನ ಯಾವುದೇ ಪ್ರವಾದಿಗೂ ನೀಡಲಾಗಿರಲಿಲ್ಲ.
ಒಂದು: ನನ್ನ ಶತ್ರುಗಳು ನನ್ನಿಂದ ಒಂದು ತಿಂಗಳ ಪ್ರಯಾಣದಷ್ಟು ದೂರದಲ್ಲಿದ್ದರೂ ಸಹ ಅವರ ಹೃದಯಗಳಲ್ಲಿ ನನ್ನ ಬಗ್ಗೆ ಭಯವನ್ನು ಹಾಕಿ ನನಗೆ ಸಹಾಯ ಮಾಡಲಾಗಿದೆ.
ಎರಡು: ನಮಗೆ ಭೂಮಿಯನ್ನು ಮಸೀದಿಯಾಗಿ ಮಾಡಿಕೊಡಲಾಗಿದೆ. ನಾವು ಎಲ್ಲೇ ಇದ್ದರೂ ಅಲ್ಲಿ ನಮಗೆ ನಮಾಝ್ ಮಾಡಬಹುದು. ನೀರು ದೊರೆಯದಿದ್ದರೆ ಮಣ್ಣನ್ನು ಶುದ್ಧೀಕರಣವಾಗಿ ಬಳಸಬಹುದು.
ಮೂರು: ನಮಗೆ ಯುದ್ಧಾರ್ಜಿತ ಸೊತ್ತನ್ನು ಅನುಮತಿಸಲಾಗಿದೆ. ಯುದ್ಧಾರ್ಜಿತ ಸೊತ್ತು ಎಂದರೆ ಮುಸಲ್ಮಾನರು ಸತ್ಯನಿಷೇಧಿಗಳ ವಿರುದ್ಧ ಯುದ್ಧ ಮಾಡಿ ಸಂಗ್ರಹಿಸುವ ಸೊತ್ತುಗಳು.
ನಾಲ್ಕು: ಪುನರುತ್ಥಾನ ದಿನದ ದಿಗಿಲಿನಿಂದ ಜನರಿಗೆ ಆರಾಮ ನೀಡುವುದಕ್ಕಾಗಿ ಮಹಾ ಶಿಫಾರಸ್ಸು ಮಾಡುವ ಅಧಿಕಾರವನ್ನು ನನಗೆ ನೀಡಲಾಗಿದೆ.
ಐದು: ನನ್ನನ್ನು ಸಂಪೂರ್ಣ ಮನುಕುಲಕ್ಕೆ—ಮನುಷ್ಯರು ಮತ್ತು ಜಿನ್ನ್ಗಳ ಕಡೆಗೆ ಕಳುಹಿಸಲಾಗಿದೆ. ಆದರೆ ನನಗಿಂತ ಮೊದಲಿನ ಪ್ರವಾದಿಗಳನ್ನು ಅವರವರ ಜನತೆಗೆ ಮಾತ್ರ ಕಳುಹಿಸಲಾಗುತ್ತಿತ್ತು.