عَنْ سَهْلٍ رَضِيَ اللهُ عَنْهُ عَنِ النَّبِيِّ صَلَّى اللهُ عَلَيْهِ وَسَلَّمَ قَالَ:
«إِنَّ فِي الْجَنَّةِ بَابًا يُقَالُ لَهُ الرَّيَّانُ، يَدْخُلُ مِنْهُ الصَّائِمُونَ يَوْمَ الْقِيَامَةِ، لَا يَدْخُلُ مِنْهُ أَحَدٌ غَيْرُهُمْ، يُقَالُ: أَيْنَ الصَّائِمُونَ، فَيَقُومُونَ لَا يَدْخُلُ مِنْهُ أَحَدٌ غَيْرُهُمْ، فَإِذَا دَخَلُوا أُغْلِقَ، فَلَمْ يَدْخُلْ مِنْهُ أَحَدٌ».
[صحيح] - [متفق عليه] - [صحيح البخاري: 1896]
المزيــد ...
ಸಹ್ಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಖಂಡಿತವಾಗಿಯೂ ಸ್ವರ್ಗದಲ್ಲಿ 'ರಯ್ಯಾನ್' ಎಂಬ ಒಂದು ಬಾಗಿಲಿದೆ. ಉಪವಾಸ ಆಚರಿಸಿದವರು ಪುನರುತ್ಥಾನ ದಿನದಂದು ಅದರ ಮೂಲಕ ಪ್ರವೇಶಿಸುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. (ಆ ದಿನ) 'ಉಪವಾಸಿಗರು ಎಲ್ಲಿ?' ಎಂದು ಕರೆಯಲಾಗುವುದು. ಆಗ ಅವರು ಎದ್ದು ನಿಲ್ಲುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. ಅವರೆಲ್ಲರೂ ಪ್ರವೇಶಿಸಿದ ನಂತರ ಅದನ್ನು ಮುಚ್ಚಲಾಗುವುದು. ನಂತರ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ".
[صحيح] - [متفق عليه] - [صحيح البخاري - 1896]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ, ಸ್ವರ್ಗದ ಬಾಗಿಲುಗಳಲ್ಲಿ ಒಂದು ಬಾಗಿಲನ್ನು 'ಬಾಬು ರ್ರಯ್ಯಾನ್' ಎಂದು ಕರೆಯಲಾಗುತ್ತದೆ. ಉಪವಾಸ ಆಚರಿಸಿದವರು ಪುನರುತ್ಥಾನ ದಿನದಂದು ಅದರ ಮೂಲಕ ಪ್ರವೇಶಿಸುವರು, ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. 'ಉಪವಾಸಿಗರು ಎಲ್ಲಿ?' ಎಂದು ಕರೆಯಲಾಗುವುದು. ಆಗ ಅವರು ಎದ್ದು ನಿಂತು ಪ್ರವೇಶಿಸುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. ಅವರಲ್ಲಿ ಕೊನೆಯವರು ಪ್ರವೇಶಿಸಿದ ನಂತರ ಅದನ್ನು ಮುಚ್ಚಲಾಗುವುದು. ನಂತರ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ.