عَنْ أَبِي سَعِيدٍ الْخُدْرِيِّ رضي الله عنه قَالَ:
كُنَّا نُخْرِجُ إِذْ كَانَ فِينَا رَسُولُ اللهِ صَلَّى اللهُ عَلَيْهِ وَسَلَّمَ زَكَاةَ الْفِطْرِ، عَنْ كُلِّ صَغِيرٍ وَكَبِيرٍ، حُرٍّ أَوْ مَمْلُوكٍ، صَاعًا مِنْ طَعَامٍ، أَوْ صَاعًا مِنْ أَقِطٍ، أَوْ صَاعًا مِنْ شَعِيرٍ، أَوْ صَاعًا مِنْ تَمْرٍ، أَوْ صَاعًا مِنْ زَبِيبٍ، فَلَمْ نَزَلْ نُخْرِجُهُ حَتَّى قَدِمَ عَلَيْنَا مُعَاوِيَةُ بْنُ أَبِي سُفْيَانَ رضي الله عنه حَاجًّا، أَوْ مُعْتَمِرًا فَكَلَّمَ النَّاسَ عَلَى الْمِنْبَرِ، فَكَانَ فِيمَا كَلَّمَ بِهِ النَّاسَ أَنْ قَالَ: إِنِّي أَرَى أَنَّ مُدَّيْنِ مِنْ سَمْرَاءِ الشَّامِ، تَعْدِلُ صَاعًا مِنْ تَمْرٍ، فَأَخَذَ النَّاسُ بِذَلِكَ، قَالَ أَبُو سَعِيدٍ: فَأَمَّا أَنَا فَلَا أَزَالُ أُخْرِجُهُ كَمَا كُنْتُ أُخْرِجُهُ، أَبَدًا مَا عِشْتُ.
[صحيح] - [متفق عليه] - [صحيح مسلم: 985]
المزيــد ...
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮೊಂದಿಗೆ ಇದ್ದಾಗ, ನಾವು ಚಿಕ್ಕವರು, ದೊಡ್ಡವರು, ಸ್ವತಂತ್ರರು ಮತ್ತು ಗುಲಾಮರು ಹೀಗೆ ಎಲ್ಲರ ಪರವಾಗಿಯೂ, ಒಂದು ಸಾಅ್ ಆಹಾರ, ಅಥವಾ ಒಂದು ಸಾಅ್ ಗಿಣ್ಣು, ಅಥವಾ ಒಂದು ಸಾಅ್ ಬಾರ್ಲಿ, ಅಥವಾ ಒಂದು ಸಾಅ್ ಖರ್ಜೂರ, ಅಥವಾ ಒಂದು ಸಾಅ್ ಒಣದ್ರಾಕ್ಷಿ ಫಿತ್ರ್ ಝಕಾತ್ ನೀಡುತ್ತಿದ್ದೆವು. ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಮ್ಮ ಬಳಿಗೆ ಹಜ್ಜ್ ಅಥವಾ ಉಮ್ರ ನಿರ್ವಹಿಸಲು ಬರುವ ತನಕ ನಾವು ಹೀಗೆಯೇ ಕೊಡುತ್ತಿದ್ದೆವು. ಅವರು ಮಿಂಬರ್ (ಪ್ರವಚನ ಪೀಠ) ಏರಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಅವರು ಜನರಿಗೆ ಹೇಳಿದ ಒಂದು ಮಾತು ಹೀಗಿತ್ತು: "ನಿಶ್ಚಯವಾಗಿಯೂ ಸಿರಿಯಾದ ಎರಡು ಮುದ್ದ್ ಗೋಧಿಯು ಒಂದು ಸಾಅ್ ಖರ್ಜೂರಕ್ಕೆ ಸಮವಾಗಿದೆ ಎಂದು ನಾನು ಕಾಣುತ್ತೇನೆ." ಜನರು ಅದನ್ನು ಅನುಸರಿಸಿದರು. (ಅಬೂ ಸಈದ್ ಹೇಳುತ್ತಾರೆ): ಆದರೆ ನಾನು ಜೀವಂತವಿರುವವರೆಗೂ ಪ್ರವಾದಿಯ ಕಾಲದಂತೆಯೇ ಫಿತ್ರ್ ಝಕಾತ್ ನೀಡುವುದನ್ನು ಮುಂದುವರಿಸಿದೆನು."
[صحيح] - [متفق عليه] - [صحيح مسلم - 985]
ಮುಸ್ಲಿಮರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ಮತ್ತು ಅವರ ನಂತರದ ಖಲೀಫರುಗಳ ಕಾಲದಲ್ಲಿ ಚಿಕ್ಕವರು ಮತ್ತು ದೊಡ್ಡವರು ಎಲ್ಲರ ಪರವಾಗಿಯೂ ಒಂದು ಸಾಅ್ ಆಹಾರದಷ್ಟು ಫಿತ್ರ್ ಝಕಾತ್ ನೀಡುತ್ತಿದ್ದರು. ಅವರ ಆಹಾರವು ಬಾರ್ಲಿ, ಝಬೀಬ್ (ಒಣದ್ರಾಕ್ಷಿ), ಅಕಿತ್ (ಗಿಣ್ಣ/ಒಣಗಿಸಿದ ಹಾಲು) ಮತ್ತು ಖರ್ಜೂರವಾಗಿತ್ತು. ಒಂದು ಸಾಅ್ ಎಂದರೆ ನಾಲ್ಕು ಮುದ್ದ್ಗಳು. ಒಂದು ಮುದ್ದ್ ಎಂದರೆ ಒಬ್ಬ ಸಾಮಾನ್ಯ ಮನುಷ್ಯನ ಎರಡು ಕೈಗಳನ್ನು ತುಂಬಿಸುವಷ್ಟು. ಖಲೀಫರಾಗಿ ಮುಆವಿಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಮದೀನಾಗೆ ಬಂದಾಗ, ಮತ್ತು ಸಿರಿಯಾದ ಗೋಧಿಯು ಹೆಚ್ಚಾದಾಗ, ಅವರು ಪ್ರವಚನ ನೀಡುತ್ತಾ ಹೇಳಿದರು: "ನಿಶ್ಚಯವಾಗಿಯೂ ಸಿರಿಯಾದ ಎರಡು ಮುದ್ದ್ ಗೋಧಿಯು ಒಂದು ಸಾಅ್ ಖರ್ಜೂರಕ್ಕೆ ಸಮವಾಗಿದೆ ಎಂದು ನಾನು ಕಾಣುತ್ತೇನೆ." ಜನರು ಅದನ್ನು ಅನುಸರಿಸಿದರು. ಅಬೂ ಸಈದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳಿದರು: "ಆದರೆ ನಾನು ನನ್ನ ಕೊನೆಯುಸಿರಿನ ತನಕ, ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ನೀಡುತ್ತಿದ್ದಂತೆಯೇ ನೀಡುತ್ತಿದ್ದೆ."