عَنْ أَبِي هُرَيْرَةَ رضي الله عنه قَالَ: قَالَ رَسُولُ اللهِ صَلَّى اللهُ عَلَيْهِ وَسَلَّمَ:
«مَنْ نَفَّسَ عَنْ مُؤْمِنٍ كُرْبَةً مِنْ كُرَبِ الدُّنْيَا نَفَّسَ اللهُ عَنْهُ كُرْبَةً مِنْ كُرَبِ يَوْمِ الْقِيَامَةِ، وَمَنْ يَسَّرَ عَلَى مُعْسِرٍ يَسَّرَ اللهُ عَلَيْهِ فِي الدُّنْيَا وَالْآخِرَةِ، وَمَنْ سَتَرَ مُسْلِمًا سَتَرَهُ اللهُ فِي الدُّنْيَا وَالْآخِرَةِ، وَاللهُ فِي عَوْنِ الْعَبْدِ مَا كَانَ الْعَبْدُ فِي عَوْنِ أَخِيهِ، وَمَنْ سَلَكَ طَرِيقًا يَلْتَمِسُ فِيهِ عِلْمًا سَهَّلَ اللهُ لَهُ بِهِ طَرِيقًا إِلَى الْجَنَّةِ، وَمَا اجْتَمَعَ قَوْمٌ فِي بَيْتٍ مِنْ بُيُوتِ اللهِ يَتْلُونَ كِتَابَ اللهِ وَيَتَدَارَسُونَهُ بَيْنَهُمْ إِلَّا نَزَلَتْ عَلَيْهِمِ السَّكِينَةُ، وَغَشِيَتْهُمُ الرَّحْمَةُ، وَحَفَّتْهُمُ الْمَلَائِكَةُ، وَذَكَرَهُمُ اللهُ فِيمَنْ عِنْدَهُ، وَمَنْ بَطَّأَ بِهِ عَمَلُهُ لَمْ يُسْرِعْ بِهِ نَسَبُهُ».
[صحيح] - [رواه مسلم] - [صحيح مسلم: 2699]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ಒಬ್ಬ ಸತ್ಯವಿಶ್ವಾಸಿಯಿಂದ ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ನಿವಾರಿಸುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಅವನಿಂದ ನಿವಾರಿಸುತ್ತಾನೆ. ಯಾರು ಕಷ್ಟದಲ್ಲಿರುವವರಿಗೆ ಸುಲಭಗೊಳಿಸುತ್ತಾನೋ, ಅಲ್ಲಾಹು ಅವನಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸುಲಭಗೊಳಿಸುತ್ತಾನೆ. ಯಾರು ಒಬ್ಬ ಮುಸ್ಲಿಮನ ನ್ಯೂನತೆಗಳನ್ನು ಮುಚ್ಚಿಡುತ್ತಾನೋ, ಅಲ್ಲಾಹು ಅವನ ನ್ಯೂನತೆಗಳನ್ನು ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಮುಚ್ಚಿಡುತ್ತಾನೆ. ದಾಸನು ತನ್ನ ಸಹೋದರನಿಗೆ ಸಹಾಯ ಮಾಡುತ್ತಿರುವ ತನಕ ಅಲ್ಲಾಹನು ದಾಸನಿಗೆ ಸಹಾಯ ಮಾಡುತ್ತಾನೆ. ಯಾರು ಜ್ಞಾನವನ್ನು ಹುಡುಕುತ್ತಾ ಒಂದು ದಾರಿಯನ್ನು ತುಳಿಯುತ್ತಾನೋ, ಅಲ್ಲಾಹು ಅವನಿಗೆ ಸ್ವರ್ಗಕ್ಕೆ ದಾರಿಯನ್ನು ಸುಲಭಗೊಳಿಸುತ್ತಾನೆ. ಒಂದು ಗುಂಪು ಜನರು ಅಲ್ಲಾಹನ ಮನೆಗಳ (ಮಸೀದಿಗಳ) ಪೈಕಿ ಒಂದರಲ್ಲಿ ಅಲ್ಲಾಹನ ಗ್ರಂಥವನ್ನು ಪಠಿಸಲು, ಮತ್ತು ಅದನ್ನು ತಮ್ಮ ನಡುವೆ ಅಧ್ಯಯನ ಮಾಡಲು ಒಟ್ಟುಗೂಡುತ್ತಾರೆ ಎಂದಾದರೆ, ಅವರ ಮೇಲೆ ಶಾಂತಿ ಇಳಿಯುತ್ತದೆ, ಕರುಣೆಯು ಅವರನ್ನು ಆವರಿಸುತ್ತದೆ, ದೇವದೂತರುಗಳು ಅವರನ್ನು ಸುತ್ತುವರಿಯುತ್ತಾರೆ ಮತ್ತು ಅಲ್ಲಾಹು ತನ್ನ ಹತ್ತಿರವಿರುವವರಿಗೆ ಅವರ ಬಗ್ಗೆ ತಿಳಿಸುತ್ತಾನೆ. ಯಾರ ಕರ್ಮಗಳು ಅವನನ್ನು ನಿಧಾನಗೊಳಿಸುತ್ತವೆಯೋ, ಅವನ ವಂಶವು ಅವನನ್ನು ಮುಂದಕ್ಕೆ ಒಯ್ಯುವುದಿಲ್ಲ."
[صحيح] - [رواه مسلم] - [صحيح مسلم - 2699]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಒಬ್ಬ ಮುಸ್ಲಿಂ ಅಲ್ಲಾಹನಿಂದ ಪಡೆಯುವ ಪ್ರತಿಫಲವು ಇತರ ಮುಸ್ಲಿಮರಿಗಾಗಿ ಅವನು ನಿರ್ವಹಿಸುವ ಕೆಲಸಗಳ ಅದೇ ಸ್ವರೂಪದ್ದಾಗಿರುತ್ತದೆ. ಯಾರು ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಮತ್ತು ತೊಂದರೆಯನ್ನು ಒಬ್ಬ ಸತ್ಯವಿಶ್ವಾಸಿಯಿಂದ ನಿವಾರಿಸುತ್ತಾನೋ, ತೊಲಗಿಸುತ್ತಾನೋ, ತೆಗೆದುಹಾಕುತ್ತಾನೋ ಅಥವಾ ಇಲ್ಲದಂತೆ ಮಾಡುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದನ್ನು ಅವನಿಂದ ನಿವಾರಿಸುವ ಮೂಲಕ ಅವನಿಗೆ ಪ್ರತಿಫಲವನ್ನು ನೀಡುತ್ತಾನೆ. ಯಾರು ಕಷ್ಟದಲ್ಲಿರುವವರಿಗೆ ಸುಲಭಗೊಳಿಸುತ್ತಾನೋ ಮತ್ತು ಕ್ಲಿಷ್ಟತೆಯನ್ನು ತೊಡೆದು ಹಾಕಿ ಸರಳಗೊಳಿಸುತ್ತಾನೋ, ಅಲ್ಲಾಹು ಇಹಲೋಕ ಮತ್ತು ಪರಲೋಕದಲ್ಲಿ ಅವನಿಗೆ ಸುಲಭಗೊಳಿಸುತ್ತಾನೆ. ಯಾರು ಒಬ್ಬ ಮುಸಲ್ಮಾನನಿಂದ ಸಂಭವಿಸುವ ಮತ್ತು ಇತರ ಯಾರೂ ತಿಳಿಯಬಾರದೆಂದು ಅವನು ಬಯಸುವ ಪ್ರಮಾದಗಳನ್ನು ಮತ್ತು ದೋಷಗಳನ್ನು ಮುಚ್ಚಿಡುತ್ತಾನೋ, ಅಲ್ಲಾಹು ಇಹಲೋಕ ಮತ್ತು ಪರಲೋಕದಲ್ಲಿ ಅವನ ತಪ್ಪುಗಳನ್ನು ಮುಚ್ಚಿಡುತ್ತಾನೆ. ದಾಸನು ಧಾರ್ಮಿಕ ಮತ್ತು ಲೌಕಿಕ ಒಳಿತುಗಳಲ್ಲಿ ತನ್ನ ಸಹೋದರನಿಗೆ ಸಹಾಯ ಮಾಡುತ್ತಿರುವವರೆಗೂ ಅಲ್ಲಾಹು ಆ ದಾಸನಿಗೆ ಸಹಾಯ ಮಾಡುತ್ತಿರುತ್ತಾನೆ. ಸಹಾಯವು ಪ್ರಾರ್ಥನೆ, ದೈಹಿಕ ನೆರವು, ಆರ್ಥಿಕ ನೆರವು ಇತ್ಯಾದಿಗಳ ಮೂಲಕವೂ ಆಗಿರಬಹುದು. ಯಾರು ಅಲ್ಲಾಹನ ಸಂಪ್ರೀತಿಯನ್ನು ಉದ್ದೇಶವಾಗಿಟ್ಟು ಧಾರ್ಮಿಕ ಜ್ಞಾನವನ್ನು ಪಡೆಯಲು ಒಂದು ದಾರಿಯಲ್ಲಿ ನಡೆಯುತ್ತಾರೋ, ಅಲ್ಲಾಹು ಅವರಿಗೆ ಸ್ವರ್ಗಕ್ಕಿರುವ ದಾರಿಯನ್ನು ಸುಗಮಗೊಳಿಸುತ್ತಾನೆ. ಒಂದು ಗುಂಪು ಜನರು ಅಲ್ಲಾಹನ ಮನೆಗಳ (ಮಸೀದಿಗಳ) ಪೈಕಿ ಒಂದರಲ್ಲಿ, ಅಲ್ಲಾಹನ ಗ್ರಂಥವನ್ನು ಪಠಿಸಲು ಮತ್ತು ಅದನ್ನು ತಮ್ಮ ನಡುವೆ ಅಧ್ಯಯನ ಮಾಡಲು ಒಟ್ಟುಗೂಡುತ್ತಾರೆ ಎಂದಾದರೆ, ಅವರ ಮೇಲೆ ಮನಃಶಾಂತಿ ಮತ್ತು ಗಾಂಭೀರ್ಯವು ಇಳಿಯುತ್ತದೆ, ಅಲ್ಲಾಹನ ಕರುಣೆಯು ಅವರನ್ನು ಆವರಿಸಿ ವ್ಯಾಪಿಸುತ್ತದೆ, ದೇವದೂತರುಗಳು ಅವರನ್ನು ಸುತ್ತುವರಿಯುತ್ತಾರೆ ಮತ್ತು ಅಲ್ಲಾಹು ತನ್ನ ಆಪ್ತ ದೇವದೂತರುಗಳ ಸಮ್ಮುಖದಲ್ಲಿ ಅವರನ್ನು ಹೊಗಳುತ್ತಾನೆ. ಅಲ್ಲಾಹು ಅತ್ಯುನ್ನತ ಸಭೆಯಲ್ಲಿ ತನ್ನ ದಾಸನ ಬಗ್ಗೆ ಉಲ್ಲೇಖಿಸುವುದು ಬಹಳ ದೊಡ್ಡ ಗೌರವದ ವಿಷಯವಾಗಿದೆ. ಯಾರ ಸತ್ಕರ್ಮಗಳು ಕಡಿಮೆಯಾಗಿರುತ್ತದೋ ಅವರನ್ನು ಸತ್ಕರ್ಮಿಗಳ ಸ್ಥಾನಕ್ಕೆ ಸೇರಿಸಲಾಗುವುದಿಲ್ಲ. ಆದ್ದರಿಂದ, ತಮ್ಮ ವಂಶದ ಶ್ರೇಷ್ಠತೆ ಮತ್ತು ತಮ್ಮ ಪೂರ್ವಜರ ಅರ್ಹತೆಯನ್ನು ನಂಬಿ ಸತ್ಕರ್ಮಗಳನ್ನು ನಿರ್ಲಕ್ಷಿಸಬೇಡಿ.