عَنْ عَائِشَةَ أُمِّ المُؤْمِنينَ رَضِيَ اللَّهُ عَنْهَا قَالَتْ:
مَا صَلَّى النَّبِيُّ صَلَّى اللهُ عَلَيْهِ وَسَلَّمَ صَلاَةً بَعْدَ أَنْ نَزَلَتْ عَلَيْهِ: {إِذَا جَاءَ نَصْرُ اللَّهِ وَالفَتْحُ} [النصر: 1] إِلَّا يَقُولُ فِيهَا: «سُبْحَانَكَ رَبَّنَا وَبِحَمْدِكَ اللَّهُمَّ اغْفِرْ لِي».
وعَنْها قَالَتْ: كَانَ رَسُولُ اللهِ صَلَّى اللهُ عَلَيْهِ وَسَلَّمَ يُكْثِرُ أَنْ يَقُولَ فِي رُكُوعِهِ وَسُجُودِهِ: «سُبْحَانَكَ اللهُمَّ رَبَّنَا وَبِحَمْدِكَ، اللهُمَّ اغْفِرْ لِي» يَتَأَوَّلُ الْقُرْآنَ.
[صحيح] - [متفق عليه] - [صحيح البخاري: 4967]
المزيــد ...
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್ಹಾನಕ ರಬ್ಬನಾ ವಬಿಹಮ್ದಿಕ್, ಅಲ್ಲಾಹುಮ್ಮಗ್ಫಿರ್ ಲೀ (ನಮ್ಮ ಪರಿಪಾಲಕನೇ, ನೀನು ಪರಮ ಪವಿತ್ರನು. ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ. ಓ ಅಲ್ಲಾಹ್, ನನ್ನನ್ನು ಕ್ಷಮಿಸು) ಎಂದು ಹೇಳದೇ ಇರುತ್ತಿರಲಿಲ್ಲ."
[صحيح] - [متفق عليه] - [صحيح البخاري - 4967]
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಇಲ್ಲಿ ತಿಳಿಸುವುದೇನೆಂದರೆ, ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." ಎಂಬ ವಚನವು ಅವತೀರ್ಣವಾದ ನಂತರ, ಅವರು ಕುರ್ಆನ್ನಲ್ಲಿರುವ ಆಜ್ಞೆಯನ್ನು ಪಾಲಿಸಿದರು ಮತ್ತು "ಆದ್ದರಿಂದ ನೀವು ನಿಮ್ಮ ಪರಿಪಾಲಕನ ಸ್ತುತಿಯೊಂದಿಗೆ ಅವನ ಪವಿತ್ರತೆಯನ್ನು ವೈಭವೀಕರಿಸಿರಿ, ಮತ್ತು ಅವನಲ್ಲಿ ಕ್ಷಮೆಯನ್ನು ಬೇಡಿರಿ." ಎಂಬ ಅಲ್ಲಾಹನ ಆಜ್ಞೆಯನ್ನು ಪಾಲಿಸಲು ತ್ವರೆ ಮಾಡಿದರು. ಆದ್ದರಿಂದ, ಅವರು ನಮಾಝ್ ಮಾಡುವಾಗ ರುಕೂ (ಬಾಗುವುದು) ಮತ್ತು ಸುಜೂದ್ (ಸಾಷ್ಟಾಂಗ ನಮಸ್ಕಾರ) ಮಾಡಿದರೆ ಅದರಲ್ಲಿ ಹೆಚ್ಚುಹೆಚ್ಚಾಗಿ ಈ ಪ್ರಾರ್ಥನೆಯನ್ನು ಹೇಳುತ್ತಿದ್ದರು: "ಸುಬ್ಹಾನಕ" (ನೀನು ಪರಮ ಪವಿತ್ರನು). ಅಂದರೆ ನೀನು ಎಲ್ಲಾ ನ್ಯೂನತೆಗಳಿಂದ ಮತ್ತು ನಿನಗೆ ಹೊಂದಿಕೊಳ್ಳದ ಎಲ್ಲಾ ಕೊರತೆಗಳಿಂದ ಮುಕ್ತನಾಗಿರುವೆ. "ಅಲ್ಲಾಹುಮ್ಮ ರಬ್ಬನಾ ವಬಿಹಮ್ದಿಕ" (ಓ ಅಲ್ಲಾಹ್ ನಮ್ಮ ಪರಿಪಾಲಕನೇ, ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ). ಅಂದರೆ ನಿನ್ನ ಸಾರ, ಗುಣಲಕ್ಷಣಗಳು ಮತ್ತು ಕ್ರಿಯೆಗಳು ಸಂಪೂರ್ಣವಾಗಿರುವುದರಿಂದ ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ. "ಅಲ್ಲಾಹುಮ್ಮಗ್ಫಿರ್ ಲೀ" (ಓ ಅಲ್ಲಾಹ್, ನನ್ನನ್ನು ಕ್ಷಮಿಸು). ಅಂದರೆ ನನ್ನ ಪಾಪವನ್ನು ಅಳಿಸಿ ಮತ್ತು ಅವುಗಳನ್ನು ಕಡೆಗಣಿಸು.