+ -

عن سعد بن عبادة رضي الله عنه أنه قال:
يَا رَسُولَ اللَّهِ، إِنَّ أُمَّ سَعْدٍ مَاتَتْ، فَأَيُّ الصَّدَقَةِ أَفْضَلُ؟، قَالَ: «الْمَاءُ»، قَالَ: فَحَفَرَ بِئْرًا، وَقَالَ: هَذِهِ لِأُمِّ سَعْدٍ.

[حسن بمجموع طرقه] - [رواه أبو داود والنسائي وابن ماجه] - [سنن أبي داود: 1681]
المزيــد ...

ಸಅದ್ ಬಿನ್ ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ಓ ಅಲ್ಲಾಹನ ಸಂದೇಶವಾಹಕರೇ! ಉಮ್ಮು ಸಅದ್ ನಿಧನರಾದರು. ಅವರ ಹೆಸರಲ್ಲಿ ಯಾವ ದಾನಧರ್ಮವು ಶ್ರೇಷ್ಠವಾಗಿದೆ?" ಅವರು ಉತ್ತರಿಸಿದರು: "ನೀರು." ಆಗ ಅವರು ಒಂದು ಬಾವಿ ತೋಡಿದರು. ಮತ್ತು ಹೇಳಿದರು: "ಇದು ಉಮ್ಮು ಸಅದ್‌ರಿಗೆ."

- - [سنن أبي داود - 1681]

ವಿವರಣೆ

ಸಅದ್ ಬಿನ್ ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ತಾಯಿ (ಉಮ್ಮು ಸಅದ್) ನಿಧನರಾದರು. ಆಗ ಅವರು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತನ್ನ ತಾಯಿ ಹೆಸರಲ್ಲಿ ಯಾವ ದಾನ ಮಾಡುವುದು ಶ್ರೇಷ್ಠವೆಂದು ಕೇಳಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನೀರು ದಾನ ಮಾಡುವುದು ಶ್ರೇಷ್ಠವೆಂದು ತಿಳಿಸಿದರು. ಅದರಂತೆ ಅವರು ಒಂದು ಬಾವಿಯನ್ನು ತೋಡಿ ಅದನ್ನು ತನ್ನ ತಾಯಿಯ ಹೆಸರಲ್ಲಿ ದಾನ ಮಾಡಿದರು.

ಹದೀಸಿನ ಪ್ರಯೋಜನಗಳು

  1. ನೀರು ಶ್ರೇಷ್ಠ ದಾನಗಳಲ್ಲಿ ಒಂದು ಎಂದು ವಿವರಿಸಲಾಗಿದೆ.
  2. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಅದ್‌ರಿಗೆ ನೀರು ದಾನ ಮಾಡಲು ಸೂಚಿಸಿದರು. ಏಕೆಂದರೆ, ಭೌತಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಹಾಗೂ ಕಠಿಣ ಬಿಸಿಲು, ನೀರಿನ ಅಭಾವ ಮತ್ತು ಜರೂರತ್ತಿನ ಕಾರಣದಿಂದ ಅದು ಹೆಚ್ಚು ಪ್ರಯೋಜನಕಾರಿಯಾಗಿದೆ.
  3. ದಾನ ಮಾಡಿದರೆ ಅದರ ಪ್ರತಿಫಲವು ಮೃತರಿಗೆ ತಲುಪುತ್ತದೆಯೆಂದು ಇದು ಸೂಚಿಸುತ್ತದೆ.
  4. ಸಅದ್ ಬಿನ್ ಉಬಾದ ತಮ್ಮ ತಾಯಿಗೆ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ಮಾಡಿದ ಒಳಿತನ್ನು ತಿಳಿಸಲಾಗಿದೆ.
ಅನುವಾದ: ಆಂಗ್ಲ ಉರ್ದು ಇಂಡೋನೇಷಿಯನ್ ಬಂಗಾಳಿ ತುರ್ಕಿ ರಷ್ಯನ್ ಬೊಸ್ನಿಯನ್ ಸಿಂಹಳೀಯ ಹಿಂದಿ ಪರ್ಷಿಯನ್ ವಿಯೆಟ್ನಾಮೀಸ್ ಟ್ಯಾಗಲಾಗ್ ಕುರ್ದಿಷ್ ಹೌಸಾ ಪೋರ್ಚುಗೀಸ್ ಮಲಯಾಳಂ ತೆಲುಗು ಸ್ವಾಹಿಲಿ ಥಾಯ್ ಪಶ್ತೋ الأسامية السويدية الأمهرية الهولندية الغوجاراتية القيرقيزية النيبالية الليتوانية الدرية الصربية الكينياروندا الرومانية المجرية التشيكية الموري المالاجاشية الولوف الأذربيجانية الأوكرانية الجورجية المقدونية الخميرية الماراثية
ಅನುವಾದಗಳನ್ನು ತೋರಿಸಿ
ಇನ್ನಷ್ಟು